ಮತ್ತೆ ಸೂರ್ಯಗ್ರಹಣ ಬಂದಿದೆ. ಮತ್ತದೇ ಹಳೇ ರಾಗ – ಗ್ರಹಣ ವೀಕ್ಷಣೆ ಸರ್ವಥಾ ಸಲ್ಲ. ಆಹಾರ ನಿಶಿದ್ಧ – ಹಳೆ ಪೇಪರ್.. ಹಳೆ ಚಿಂದಿ..ಯ ಹಾಗೆ.
ಬೆಂಗಳೂರಲ್ಲಿ ವಿಜ್ಞಾನಿಗಳಿಗೂ ಜ್ಯೋತಿಷಿಗಳಿಗೂ ಜಟಾಪಟಿ ಶುರುವಾಗಿದೆಯಂತೆ.
ದೈವಜ್ಞರೊಬ್ಬರು ಅಪ್ಪಣೆ ಕೊಡಿಸಿದ್ದಾರೆ
ಮಹಾಭಾರತ ಯುದ್ಧ, ದ್ವಿತೀಯ ಜಾಗತಿಕ ಯುದ್ಧ, ಇಂದಿರಾಗಾಂಧಿಯ ಹತ್ಯೆ ನಡೆದಾಗ ಸೂರ್ಯಗ್ರಹಣ ಸಂಭವಿಸಿತ್ತು. ಗ್ರಹಣ ಕಾಲದಲ್ಲಿ ವ್ಯಕ್ತಿ ಹೆಚ್ಚು ವ್ಯಗ್ರನಾಗುತ್ತಾನೆ. ಅವನ ಮಾನಸಿಕ ಸ್ಥಿತಿಯಲ್ಲಿ ಏರು ಪೇರಾಗುತ್ತದೆ. ಹೆಚ್ಚು ಸೋಲುವ ಮನೋಭಾವ ಗೋಚರಿಸುತ್ತೆ. ಇದಕ್ಕೆಲ್ಲ ಪರಿಹಾರವೆಂದರೆ ಜನರು ಪೂಜೆ, ಯಜ್ಞಗಳಲ್ಲಿ ತೊಡಗುವುದು ಅಥವಾ ದೇವಸ್ಥಾನಕ್ಕೆ ತೆರಳಿ ಪರಿಹಾರ ಕಂಡುಕೊಳ್ಳುವುದು.
Keep reading →
Categories: ಖಗೋಳವಿಜ್ಞಾನ · ವಿಜ್ಞಾನ ಲೇಖನಗಳು
ನಿತ್ಯ ಬದುಕಿನ ಏಕತಾನತೆಯಿಂದ ಒಂದಷ್ಟು ಬಿಡುಗಡೆಗೆ ಮನ ಹಾರೈಸುತ್ತಿತ್ತು. ಊಟಿ, ಮುನ್ನಾರ್, ಕೊಡೈಕನಾಲ್ ಪ್ರವಾಸೀ ತಾಣಗಳಾಗಿ ಸುಪ್ರಸಿದ್ಧ. ಇವುಗಳಿಗೆ ಸ್ಟಾರ್ ವ್ಯಾಲ್ಯೂ ಬಂದಿದೆ – ಸ್ಟಾರ್ ಹೋಟೇಲುಗಳೊಂದಿಗೆ. ಅಲ್ಲಿಗೆ ಹೋದರೆ ಹೇಗೆ? ಅಲ್ಲಾದರೋ ಮೇ ತಿಂಗಳಿನಲ್ಲಿ ಜನಜಂಗುಳಿ ಗಿಜಿಗುಟ್ಟುತ್ತಿರಬಹುದು. ವಾಲ್ಪಾರೈ ಅಥವಾ ಷೊಲೆಯಾರ್ ? ಪ್ರವಾಸಿಗಳಿಗೆ ಹೆಚ್ಚು ತೆರೆದುಕೊಳ್ಳದ ಮತ್ತು ಹಾಗಾಗಿ ತಮ್ಮ ತಾಜತನ ಉಳಿಸಿಕೊಂಡ ರಮ್ಯ ತಾಣಗಳಿವು. ಊಟಿ ಮತ್ತು ಮುನ್ನಾರಿಗೆ ಸಮೀಪವಿರುವ ಈ ತಾಣಗಳಿಗೆ ಕುಟುಂಬ ಸಮೇತ ಭೇಟಿ ನೀಡುವ ಅವಕಾಶ ದೊರೆತದ್ದು ಆತ್ಮೀಯರೂ ಬಂಧುಗಳೂ ಆದ ಗಣೇಶನ್ ಅವರಿಂದಾಗಿ.
ಗಣೇಶನ್ ವಾಲ್ಪಾರೈನಿಂದ ಇಪ್ಪತ್ತು ಕಿಮೀ ದೂರದ ಮನಂಬೋಲಿ ಜಲವಿದ್ಯುದ್ ಗಾರದ ಮುಖ್ಯಸ್ಥರು. ಅದೊಂದು ಕಿರು ವಿದ್ಯುತ್ ಘಟಕ. ಇದು ಕೊಯಂಬುತ್ತೂರಿನಿಂದ ಸುಮಾರು ನೂರಿಪ್ಪತ್ತು ಕಿಮೀ ದೂರದಲ್ಲಿದೆ. ಅವರು ಸಿಕ್ಕಾಗಲೆಲ್ಲ ಹೇಳುತ್ತಿದ್ದರು, “ನೀವೊಮ್ಮೆ ಬರಬೇಕು ವಾಲ್ಪರೈನ ದಟ್ಟ ಕಾನನದ ನಡುವೆ ಇರುವ ನಮ್ಮ ಮನೆಗೆ.” ಅವರ ಪ್ರೀತಿಯ ಕರೆಗೆ ಅಲ್ಲಿಗೆ ಹೋದ ಮೇಲೆ ಉದ್ಗರಿಸಿದ್ದು ’ಆಹಾ, ಸ್ವರ್ಗ ಬೇರೆ ಎಲ್ಲೂ ಇಲ್ಲ, ಇಲ್ಲಿದೆ’!
Keep reading →
Categories: ಪ್ರವಾಸ

ಫ್ರಖರ ಚಿಂತಕ ಮೂಢನಂಬುಗೆಯ ಭಂಜಕ
ವಿಜ್ಞಾನ ವಾಙ್ಮಯಕ್ಕೆ ಇವರು ಜಿಟಿಎನ್ – ಜಿಟಿನಾರಾಯಣ ರಾವ್. ನಮಗೆ ಮರಿಕೆಯ ಮಂದಿಗೆ? ಮರಿಕೆಯ ಹಿರಿಯರಿಗೆ ನಾರಾಯಣ, ಮಕ್ಕಳಿಗೆ ನಾರಾಯಣ ಮಾವ, ಮರಿಮಕ್ಕಳಿಗೆ ನಾರಾಯಣಜ್ಜ.
ಇವರು ಮರಿಕೆಗೆ ಬರುತ್ತಾರೆಂದರೆ ನಮಗೆಲ್ಲ ಸಂಭ್ರಮ, ಉತ್ಸಾಹ, ಒಂದಷ್ಟು ದಿಗಿಲು – ಪುಂಖಾನುಪುಂಖವಾಗಿ ಅವರೆಸೆಯುತ್ತಿದ್ದ ವಿಜ್ಞಾನ ಸಂಗೀತಾದಿ ಪ್ರಶ್ನೆಗಳಿಗೆ ಉತ್ತರಿಸಬೇಕಲ್ಲ.
ಮರಿಕೆ ಇರುವುದು ಪುತ್ತೂರು ಪೇಟೆಯಿಂದ ಐದು ಕಿಮೀ ದೂರದಲ್ಲಿ, ಹಸಿರು ಹೊದ್ದು ಮಲಗಿರುವ ಬಲ್ಲೇರಿ ಕಾಡಿನ ಸನಿಹದಲ್ಲಿ. ಜಿಟಿಎನ್ ಹುಟ್ಟಿದ್ದು ಮರಿಕೆಯಲ್ಲಿ (೩೦.೧.೧೯೨೬). ನನ್ನ ತಂದೆಯ ತಂದೆ – ಅಂದರೆ ಅಜ್ಜ ಸುಬ್ಬಯ್ಯರ ತಂಗಿ ವೆಂಕಟಲಕ್ಶ್ಮಿ ಜಿಟಿಯವರ ತಾಯಿ. ಸಾಹಿತ್ಯದಲ್ಲಿ ಅಗಾಧ ಆಸಕ್ತಿ ಇದ್ದ ಅಜ್ಜ ಜಿಟಿಎನ್ ಅವರ ಮೇಲೆ ಗಾಢ ಪ್ರಭಾವ ಬೀರಿದರೆನ್ನುವುದನ್ನು ಆಗಾಗ ಹೇಳುತ್ತಿದ್ದರು ಮತ್ತು ಅದನ್ನು ತಮ್ಮ ಎನ್ ಸಿಸಿ ದಿನಗಳು, ಮುಗಿಯದ ಪಯಣ ಕೃತಿಗಳಲ್ಲಿ ದಾಖಲಿಸಿದ್ದಾರೆ.
Keep reading →
Categories: ವ್ಯಕ್ತಿ - ಜೀವನ
ಪಾಕಿಸ್ತಾನದಲ್ಲಿ ಮತ್ತೊಂದು ಬರ್ಬರ ತಾಲೀಬಾನೀ ಕಾನೂನು ಜಾರಿಗೆ ಬಂದ ಕಳವಳಕಾರೀ ವರದಿ ವಾರಗಳ ಹಿಂದೆ ಆಂಗ್ಲ ದೈನಿಕ ದಿ.ಹಿಂದೂ ಪತ್ರಿಕೆಯಲ್ಲಿ ಪ್ರಕಟವಾಗಿತ್ತು. ಹುಡುಗಿಯೊಬ್ಬಳಿಗೆ ಅನೈತಿಕ ಸಂಬಂಧವಿದೆ ಎಂಬ ಗುಮಾನಿ. ಎಂಥ ಘೋರ ಅಪರಾಧವಿದು!. ಉಗ್ರ ತಾಲೀಬಾನೀಗಳ ಮುಖಂಡರು ಶಿಕ್ಷೆ ಘೋಷಿಸಿದರು - ಸಾರ್ವಜನಿಕವಾಗಿ ಮರಣ ದಂಡನೆ. ಬೇರಾರೂ ಇನ್ನು ಮುಂದೆ ಅಂಥ ತಪ್ಪು ಮಾಡಬಾರದಲ್ಲ ಅದಕ್ಕೆ. ಅವರಿಬ್ಬರನ್ನು ಗುಂಡಿಕ್ಕಿ ಕೊಲ್ಲಲಾಯಿತು.
ಹುಡುಗಿ ಗೋಗರೆಯುತ್ತಿದ್ದಳಂತೆ - “ದಯವಿಟ್ಟು ಕ್ಷಮಿಸಿ, ನಾನು ಯಾವ ತಪ್ಪೂ ಮಾಡಿಲ್ಲ.“ ಆದರೆ ಧರ್ಮದ ಹೆಸರಿನಲ್ಲಿ ಅಂಧರಾದ ಕ್ರೂರಿಗಳು ಬಿಡಲಿಲ್ಲ. ಒಂದರ ಮೇಲೊಂದರಂತೆ ಎದೆಗೆ ಗುಂಡಿಕ್ಕಿದರು. ಧರೆಗೆ ಒರಗಿದ ಅವಳಲ್ಲಿನ್ನೂ ಕುಟುಕು ಜೀವ ತುಡಿಯುತ್ತಿತ್ತಂತೆ. ಅಲ್ಲಿದ್ದ ನ್ಯಾಯಪರುರು ಹೇಳಿದರಂತೆ “ಜೀವ ಉಂಟು, ಗುಂಡಿಕ್ಕಿ” ಮತ್ತೆ ಕೆಲವು ನುಗ್ಗಿದುವು ದೇಹಕ್ಕೆ. ಆಮೇಲೆ ಹುಡುಗನನ್ನು ಬಿಡಲಿಲ್ಲ, ನಿರ್ದಯಿಗಳು ಹತ್ಯೆ ಮಾಡಿದರು. ಸಾರ್ವಜನಿಕವಾಗಿ ಹುಡುಗಿಗೆ ಛಡಿ ಏಟು ಕೊಟ್ಟ ಶಿಕ್ಷೆಯ ಸುದ್ದಿ ತಣ್ಣಗಾಗುವುದರೊಳಗೆ ಬಂದ ಈ ವರದಿ ಮುಂಬರುವ ದಿನಗಳಲ್ಲಿ ಪಾಕಿಸ್ಥಾನ ಯಾವ ಹಾದಿ ಹಿಡಿಯಲಿದೆ ಎನ್ನುವುದರ ಸ್ಪಷ್ಟ ಸೂಚೆನೆಯಾಗಿದೆ. ಈಗಾಗಲೇ ಹಲವು ಉಗ್ರಗಾಮಿ ಸಂಘಟನೆಗಳ ತಾಣವಾದ ಪಾಕಿಸ್ಥಾನದ ಎಲ್ಲ ಉಗ್ರರನ್ನು ಒಟ್ಟು ಮಾಡಿದ ಪ್ರತೀಕವೋ ಎನ್ನುವಂಥ ತಾಲಿಬಾನಿಗಳ ಕೈ ಮೇಲಾಗುತ್ತಿರುವದನ್ನು ಕಂಡ ಅಮೇರಿಕ, ಇಂಗ್ಲೆಂಡ್ ಮೊದಲಾದ ರಾಷ್ಟ್ರಗಳು ತಮ್ಮ ಕಳವಳ ವ್ಯಕ್ತಪಡಿಸತೊಡಗಿವೆ.
Keep reading →
Categories: ಸ್ವಗತಗಳು
ಶಿವರಾಮಕಾರಂತರು ಕನ್ನಡದ ಶ್ರೇಷ್ಟ ಕಾದಂಬರಿಕಾರರಾಗಿ ಸುಪ್ರಸಿದ್ದರು. ಚೋಮನ ದುಡಿಯಿಂದ ತೊಡಗಿ ಮೂಕಜ್ಜಿಯ ಕನಸುಗಳ ತನಕ ಅವರು ಬರೆದ ಕಾದಂಬರಿಗಳು ಕನ್ನಡ ಮನಸ್ಸನ್ನು ತಟ್ಟಿದ ಬಗೆ ಅನನ್ಯವಾದದ್ದು. ಆದರೆ ಆಶ್ಚರ್ಯವಾಗಬಹುದು - ಅವರ ಪ್ರಥಮ ಆಸಕ್ತಿ ಇದ್ದುದು - ವೈಚಾರಿಕ ಬರಹಗಳಲ್ಲಿ - ಅದರಲ್ಲೂ ವಿಜ್ಞಾನ ಸಾಹಿತ್ಯದಲ್ಲಿ.
ಕಾಲೇಜು ಮೆಟ್ಟಲೇರಿ, ವಿಶ್ವವಿದ್ಯಾಲಯದ ಅಂಗಣದಲ್ಲಿ ವಿಜ್ಞಾನದ “ಕ್ರಮಬದ್ಧ ಶಿಕ್ಷಣ” ಪಡೆಯದೇ ಹೋದರೂ ಬೆರಗಾಗುವಷ್ಟು ವಿಪುಲವಾಗಿ ಜನಪ್ರಿಯ ವಿಜ್ಞಾನ ಸಾಹಿತ್ಯವನ್ನು ಕಾರಂತರು ರಚಿಸಿದರು. ಮೂರು ಸಂಪುಟಗಳ “ಬಾಲಪ್ರಪಂಚ” (೧೯೩೬) ಮತ್ತು ನಾಲ್ಕು ಸಂಪುಟಗಳ “ವಿಜ್ಞಾನ ಪ್ರಪಂಚ” (೧೯೫೯) ವಿಜ್ಞಾನದ ಬಗ್ಗೆ ಕಾರಂತರ ತೀವ್ರ ವಿಜ್ಞಾನ ಆಸ್ಥೆಗೆ ಸಾಕ್ಷಿಯಾಗಿವೆ. ಸುಮಾರು ಮೂರು ಸಾವಿರ ಪುಟಗಳಿಗೆ ವಿಸ್ತರಿಸಿಕೊಂಡಿರುವ ಈ ಸಂಪುಟಗಳು ಒಂದು ವಿಶ್ವವಿದ್ಯಾಲಯದ ಹಲವು ಪ್ರಾದ್ಯಾಪಕ ಮಹೋದಯರು ಸೇರಿ ಮಾಡಬಹುದಾದ ಮಹೋನ್ನತ ಕಾರ್ಯ. ಆದರೆ ನಾವು ಗಮನಿಸಬೇಕಾದದ್ದು ಶಿವರಾಮ ಕಾರಂತರು ಇವೆಲ್ಲವನ್ನು ಏಕಾಂಗಿಯಾಗಿ ಮಾಡಿದರು. ಇವಷ್ಟೇ ಅಲ್ಲ, ಮತ್ತೂ ಹಲವು ವಿಜ್ಞಾನ ಪುಸ್ತಕ ಮತ್ತು ಲೇಖನಗಳನ್ನು ಬರೆದರು.
Keep reading →
Categories: ವ್ಯಕ್ತಿ - ಜೀವನ